ಆರೋಗ್ಯ

ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

256

ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.

ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

    ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

  • ವಿಸ್ಮಯ ಜಗತ್ತು

    256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

    ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.