ಆರೋಗ್ಯ

ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

265

ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.

ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

    ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.