ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.