ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….