ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಬೆಲ್ಲವನ್ನು ತಿನ್ನುವುದು ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ ಎಂದು ಹೌದು ಇಂದು ನಾವು ಬೆಲ್ಲದ ಕೆಲ ಪ್ರಾಮುಖ್ಯತೆಗಳ ಬಗ್ಗೆ ವಿಸ್ತಾರವಾಗಿ ನಿಮಗೆ ಹೇಳಲಿದ್ದೇವೆ.
ಇನ್ನು ಈಗ ಎಲ್ಲಿ ನೋಡಿದರು ಅಲ್ಲಿ ಮಾಲಿನ್ಯ ಭರಿತ ವಾತಾವರಣವಿದೆ, ವಾಯು ಮಾಲಿನ್ಯದಿಂದಾಗಿ ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯಿರಿ ಇದು ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆಯನ್ನು ಪರಿಹರಿಸುತ್ತದೆ. ಇನ್ನು ದೇಹದ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಮೇಲಿನಿಂದ ಒಂದು ಲೋಟ ಬಿಸಿನೀರನ್ನು ಕುಡಿಯಿರಿ, ಇದು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇನ್ನು ನೀವು ರಕ್ತ ಹೀನತೆಯಿಂದ ಬಳಲುತ್ತಿದ್ದರೆ ಮಲಗುವ ವೇಳೆಗೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯಿರಿ ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗುತ್ತದೆ ಮತ್ತು ರಕ್ತದ ಕೊರತೆಯನ್ನು ನಿವಾರಣೆ ಮಾಡಲಾಗುತ್ತದೆ ಮತ್ತು ಈ ಪರಿಹಾರದಿಂದ ನೀವು ಕೆಲವೇ ದಿನಗಳಲ್ಲಿ ರಕ್ತಹೀನತೆ ಸಮಸ್ಯೆಯಿಂದ ದೂರಾಗುವಿರಿ.
ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಹಲವು ರೋಗಗಳನ್ನು ಬೆಲ್ಲ ಹೇಗೆ ನಿವಾರಣೆ ಮಾಡುತ್ತದೆ ಎನ್ನುವುದನ್ನು ಈ ಕೆಳಗಿನ ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ.
ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು ಅನುಮಾನ ಇದ್ದರೆ ವೈದ್ಯರ ಬಳಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…