ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ.
ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ.
ನಮ್ಮ ಜೀವನದಲ್ಲಿ ನೀರು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನುಷ್ಯನ ದೇಹದಲ್ಲಿ 70% ನೀರು ಇರುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲೂ ನೀರು ಬೇಕೇ ಬೇಕು. ಆದರೆ ಇತ್ತೀಚೆಗೆ ಮಾಲಿನ್ಯದಿಂದ ಜೀವಜಲ ಕಲುಷಿತವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಹಲವು ಕಾಯಿಲೆಗಳು ಬರುತ್ತಿದೆ. ಹೀಗಾಗಿ ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ನೀರು ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭವಿದೆ.
ಆರ್ಯುವೇದದಲ್ಲಿ ತಾಮ್ರ ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಯಾಕೆಂದರೆ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ಪಿತ್ತ, ಕಫಗಳಲ್ಲಿ ಏರುಪೇರು ಉಂಟಾಗುವುದಿಲ್ಲ. ಅದರಲ್ಲೂ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರಿನಲ್ಲಿ ತುಳಸಿ ಎಲೆಗಳನ್ನು ಹಾಕಿಟ್ಟರೆ ಇನ್ನೂ ಉತ್ತಮ. ಈ ನೀರನ್ನು ಪ್ರತಿನಿತ್ಯ ಕುಡಿದರೆ ಕಫ ಕಡಿಮೆಯಾಗುತ್ತದೆ. ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಈ ನೀರು ಸಹಕರಿಸುತ್ತದೆ. ಜೊತೆಗೆ ದೇಹದಲ್ಲಿ ವಿಷಕಾರಿ ಆಮ್ಲ ಹೊರಹೊಮ್ಮದಂತೆ ಇದು ತಡೆಯುತ್ತದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದೆ, ಇದು ಹಲವಾರು ಆರೋಗ್ಯಕರ ಪ್ರಯೋಜನ ಗಳನ್ನು ನೀಡುತ್ತದೆ. ಇದು ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್ಗಳನ್ನು ನಿರ್ಮಿಸಲು ಅಗತ್ಯವಾಗಿವೆ. ಅಲ್ಲದೇ ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತರ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾಗುತ್ತವೆ. ಅಲ್ಲದೇ ನೀರು ಕುಡಿಯುವ ಅರ್ಹತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿರುತ್ತದೆ. ನೀರನ್ನು ಸಂಗ್ರಹಿಸಲು ಬಳಸುವ ತಾಮ್ರದ ಪಾತ್ರೆಯ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಬೇಕು. ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಮಿತವಾಗಿ ಕುಡಿಯಬೇಕು. ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ 2 ರಿಂದ 3 ಲೋಟ ನೀರು ದೇಹಕ್ಕೆ ಬೇಕಾದ ಅಗತ್ಯ ತಾಮ್ರದ ಅಂಶವನ್ನು ಒದಗಿಸುತ್ತದೆ. ಮನುಷ್ಯ ದೇಹಕ್ಕೆ ಕೇವಲ 6 ಮಿಲಿಗ್ರಾಂ ತಾಮ್ರದ ಅಂಶ ಮಾತ್ರ ಅವಶ್ಯಕವಾಗಿರುತ್ತದೆ. ಒಂದು ವೇಳೆ ಅದಕ್ಕಂತ ಹೆಚ್ಚು ಪ್ರಮಾಣದಲ್ಲಿ ತಾಮ್ರ ನಮ್ಮ ದೇಹ ಸೇರಿದರೆ ಆರೋಗ್ಯಕ್ಕೆ ಹಾನಿಕಾರಕ. 1 ಗ್ರಾಂ ತಾಮ್ರದ ಅಂಶಕ್ಕಿಂತ ಹೆಚ್ಚು ತಾಮ್ರ ನಮ್ಮ ದೇಹ ಸೇರಿದರೆ ಕಿಡ್ನಿ ಸಮಸ್ಯೆ, ಹೊಟ್ಟೆ ನೋವು ಇನ್ನಿತರ ಸಮಸ್ಯೆಗಳು ಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.
ತೂಕ ಇಳಿಕೆಗೆ ನೆರವಾಗುತ್ತದೆ : ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಳ್ಳುತ್ತದೆ. ಕೊಬ್ಬನ್ನು ಬಳಸಿಕೊಂಡ ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲಾಗುತ್ತದೆ. ಇದು ತೂಕ ಇಳಿಕೆಗೆ ನೆರವಾಗುತ್ತದೆ. ನೀವು ಹೆಚ್ಚು ವ್ಯಾಯಾಮ ಮಾಡದೇ ಪರಿಣಾಮಕಾರಿಯಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಹೆಚ್ಚು ಹೆಚ್ಚಾಗಿ ತಾಮ್ರದ ಪಾತ್ರೆಯಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಪ್ರಾರಂಭಿಸಿ.
ಚರ್ಮದ ಆರೋಗ್ಯಕ್ಕೆ ಒಳ್ಳೆಯದು : ಚರ್ಮದ ಆರೋಗ್ಯ ರಕ್ಷಣೆಯಲ್ಲಿ ತಾಮ್ರ ಬಹಳ ಸಹಕಾರಿಯಾಗಿದೆ. ತಾಮ್ರದ ಪಾತ್ರೆಗಳಲ್ಲಿ ಇಟ್ಟ ನೀರನ್ನು ಸೇವಿಸುವುದರಿಂದ ಮೆಲನಿನ್ ಉತ್ಪಾದನೆಯಾಗಿ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಹಾಗೆಯೇ ಚರ್ಮದ ಅಲರ್ಜಿ, ಮೊಡವೆಗಳು ಕೂಡ ಕಡಿಮೆಯಾಗುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ : ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿನ ಬ್ಯಾಕ್ಟೀರಿಯಾ ನಾಶವಾಗುತ್ತವೆ. ಈ ನೀರು ಉರಿಯೂತವನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆ ವ್ಯವಸ್ಥೆ ಉತ್ತಮಗೊಳ್ಳುವಂತೆ ಮಾಡುತ್ತದೆ.
ಹೃದಯಕ್ಕೆ, ವಿಶೇಷವಾಗಿ ಅಧಿಕ ರಕ್ತದೊತ್ತಡಕ್ಕೆ ಒಳ್ಳೆಯದು :ಅಮೇರಿಕನ್ ಕ್ಯಾನ್ಸರ್ ಸೊಸೈಟಿಯ ಪ್ರಕಾರ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು ತಾಮ್ರ ಉತ್ತಮವಾಗಿದೆ. ಅಲ್ಲದೇ ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸಿ ಅಧಿಕ ರಕ್ತದೊತ್ತಡವನ್ನು ತಗ್ಗಿಸಲೂ ನೆರವಾಗುತ್ತದೆ.
ಸಂಧಿವಾತ ಮತ್ತು ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಒಳ್ಳೆಯದು : ತಾಮ್ರದಲ್ಲಿರುವ ಉರಿಯೂತ ನಿವಾರಕ ಗುಣ ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಮತ್ತು ಸಂಧಿವಾತ ಕಡಿಮೆಯಾಗಿಸಲು ನೆರವಾಗುತ್ತದೆ. ಈ ತೊಂದರೆ ಇರುವವರು ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯಲು ಪ್ರಾರಂಭಿಸುವುದು ಉತ್ತಮ
ತೂಕ ಕಡಿಮೆ ಮಾಡುತ್ತೆ : ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಸೇವಿಸಿದರೆ ತೂಕವನ್ನು ಇಳಿಸಿಕೊಳ್ಳಬಹುದು. ಕೆಲವೊಮ್ಮೆ ಕಬ್ಬಿಣಾಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ತಿಂದು ಡಯಟ್ ಮಾಡಿದರೂ ತೂಕ ಕಡಿಮೆಯಾಗಲ್ಲ. ಹೀಗಾಗಿ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು ತಾಮ್ರದ ಪಾತ್ರೆಗಳಲ್ಲಿಟ್ಟ ನೀರು ಕುಡಿಯುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜೊತೆಗೆ ದೇಹದಲ್ಲಿ ಕೊಬ್ಬಿನಂಶವು ಹೆಚ್ಚಾಗದಂತೆ ತಡೆಯುತ್ತದೆ.
ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ :ತಾಮ್ರ ಕಡಿಮೆಯಾದರೆ ನಮ್ಮ ದೇಹ ಕಬ್ಬಿಣವನ್ನು ಹೀರಿಕೊಳ್ಳುವ ಸಾಮರ್ಥವೂ ಕಡಿಮೆಯಾಗುತ್ತದೆ. ಪರಿಣಾಮ, ರಕ್ತಹೀನತೆ. ಹಾಗಾಗಿ ಆಹಾರದಲ್ಲಿ ಕಬ್ಬಿಣದ ಅಂಶವಿದ್ದರೂ, ಇದನ್ನು ಹೀರಿಕೊಳ್ಳಲು ತಾಮ್ರದ ನೆರವು ಬೇಕೇ ಬೇಕು. ತಾಮ್ರದ ಅಂಶ ದೇಹದಲ್ಲಿ ಹೆಚ್ಚಿದರೆ ಕಬ್ಬಿಣದ ಅಂಶವೂ ಹೆಚ್ಚುತ್ತದೆ, ತನ್ಮೂಲಕ ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ
ಗಾಯಗಳು ಬೇಗ ವಾಸಿಯಾಗುತ್ತೆ :ತ
ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ?ಾಮ್ರದ ಪಾತ್ರೆ ನೀರಿನಲ್ಲಿ ಬ್ಯಾಕ್ಟಿರಿಯಾ ಹಾಗೂ ವೈರಸ್ ನಾಶಪಡಿಸುವ ಶಕ್ತಿ ಇರುತ್ತದೆ. ಹೀಗಾಗಿ ಈ ನೀರು ಗಾಯಗಳು ಬೇಗನೆ ವಾಸಿಯಾಗಲು ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಈ ನೀರು ಹೆಚ್ಚಿಸಲು ಸಹಕರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…