News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ

ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

165

ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. 
ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ. 

ಮ್ಮ ಜೀವನದಲ್ಲಿ ನೀರು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನುಷ್ಯನ ದೇಹದಲ್ಲಿ 70% ನೀರು ಇರುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲೂ ನೀರು ಬೇಕೇ ಬೇಕು. ಆದರೆ ಇತ್ತೀಚೆಗೆ ಮಾಲಿನ್ಯದಿಂದ ಜೀವಜಲ ಕಲುಷಿತವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಹಲವು ಕಾಯಿಲೆಗಳು ಬರುತ್ತಿದೆ. ಹೀಗಾಗಿ ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ನೀರು ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭವಿದೆ. 

ಆರ್ಯುವೇದದಲ್ಲಿ ತಾಮ್ರ ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಯಾಕೆಂದರೆ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ಪಿತ್ತ, ಕಫಗಳಲ್ಲಿ ಏರುಪೇರು ಉಂಟಾಗುವುದಿಲ್ಲ. ಅದರಲ್ಲೂ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರಿನಲ್ಲಿ ತುಳಸಿ ಎಲೆಗಳನ್ನು ಹಾಕಿಟ್ಟರೆ ಇನ್ನೂ ಉತ್ತಮ. ಈ ನೀರನ್ನು ಪ್ರತಿನಿತ್ಯ ಕುಡಿದರೆ ಕಫ ಕಡಿಮೆಯಾಗುತ್ತದೆ. ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಈ ನೀರು ಸಹಕರಿಸುತ್ತದೆ. ಜೊತೆಗೆ ದೇಹದಲ್ಲಿ ವಿಷಕಾರಿ ಆಮ್ಲ ಹೊರಹೊಮ್ಮದಂತೆ ಇದು ತಡೆಯುತ್ತದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದೆ, ಇದು ಹಲವಾರು ಆರೋಗ್ಯಕರ ಪ್ರಯೋಜನ ಗಳನ್ನು ನೀಡುತ್ತದೆ. ಇದು ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ಅಗತ್ಯವಾಗಿವೆ. ಅಲ್ಲದೇ ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.

ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತರ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾಗುತ್ತವೆ. ಅಲ್ಲದೇ ನೀರು ಕುಡಿಯುವ ಅರ್ಹತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿರುತ್ತದೆ. ನೀರನ್ನು ಸಂಗ್ರಹಿಸಲು ಬಳಸುವ ತಾಮ್ರದ ಪಾತ್ರೆಯ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಬೇಕು. ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಮಿತವಾಗಿ ಕುಡಿಯಬೇಕು. ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ 2 ರಿಂದ 3 ಲೋಟ ನೀರು ದೇಹಕ್ಕೆ ಬೇಕಾದ ಅಗತ್ಯ ತಾಮ್ರದ ಅಂಶವನ್ನು ಒದಗಿಸುತ್ತದೆ. ಮನುಷ್ಯ ದೇಹಕ್ಕೆ ಕೇವಲ 6 ಮಿಲಿಗ್ರಾಂ ತಾಮ್ರದ ಅಂಶ ಮಾತ್ರ ಅವಶ್ಯಕವಾಗಿರುತ್ತದೆ. ಒಂದು ವೇಳೆ ಅದಕ್ಕಂತ ಹೆಚ್ಚು ಪ್ರಮಾಣದಲ್ಲಿ ತಾಮ್ರ ನಮ್ಮ ದೇಹ ಸೇರಿದರೆ ಆರೋಗ್ಯಕ್ಕೆ ಹಾನಿಕಾರಕ. 1 ಗ್ರಾಂ ತಾಮ್ರದ ಅಂಶಕ್ಕಿಂತ ಹೆಚ್ಚು ತಾಮ್ರ ನಮ್ಮ ದೇಹ ಸೇರಿದರೆ ಕಿಡ್ನಿ ಸಮಸ್ಯೆ, ಹೊಟ್ಟೆ ನೋವು ಇನ್ನಿತರ ಸಮಸ್ಯೆಗಳು ಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ತೂಕ ಇಳಿಕೆಗೆ ನೆರವಾಗುತ್ತದೆ : ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಳ್ಳುತ್ತದೆ. ಕೊಬ್ಬನ್ನು ಬಳಸಿಕೊಂಡ ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲಾಗುತ್ತದೆ. ಇದು ತೂಕ ಇಳಿಕೆಗೆ ನೆರವಾಗುತ್ತದೆ. ನೀವು ಹೆಚ್ಚು ವ್ಯಾಯಾಮ ಮಾಡದೇ ಪರಿಣಾಮಕಾರಿಯಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಹೆಚ್ಚು ಹೆಚ್ಚಾಗಿ ತಾಮ್ರದ ಪಾತ್ರೆಯಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಪ್ರಾರಂಭಿಸಿ. 

ಚರ್ಮದ ಆರೋಗ್ಯಕ್ಕೆ ಒಳ್ಳೆಯದು : ಚರ್ಮದ ಆರೋಗ್ಯ ರಕ್ಷಣೆಯಲ್ಲಿ ತಾಮ್ರ ಬಹಳ ಸಹಕಾರಿಯಾಗಿದೆ. ತಾಮ್ರದ ಪಾತ್ರೆಗಳಲ್ಲಿ ಇಟ್ಟ ನೀರನ್ನು ಸೇವಿಸುವುದರಿಂದ ಮೆಲನಿನ್ ಉತ್ಪಾದನೆಯಾಗಿ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಹಾಗೆಯೇ ಚರ್ಮದ ಅಲರ್ಜಿ, ಮೊಡವೆಗಳು ಕೂಡ ಕಡಿಮೆಯಾಗುತ್ತದೆ.


ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ : ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿನ ಬ್ಯಾಕ್ಟೀರಿಯಾ ನಾಶವಾಗುತ್ತವೆ. ಈ ನೀರು ಉರಿಯೂತವನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆ ವ್ಯವಸ್ಥೆ ಉತ್ತಮಗೊಳ್ಳುವಂತೆ ಮಾಡುತ್ತದೆ.

ಹೃದಯಕ್ಕೆ, ವಿಶೇಷವಾಗಿ ಅಧಿಕ ರಕ್ತದೊತ್ತಡಕ್ಕೆ ಒಳ್ಳೆಯದು :ಅಮೇರಿಕನ್ ಕ್ಯಾನ್ಸರ್ ಸೊಸೈಟಿಯ ಪ್ರಕಾರ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು ತಾಮ್ರ ಉತ್ತಮವಾಗಿದೆ. ಅಲ್ಲದೇ ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸಿ ಅಧಿಕ ರಕ್ತದೊತ್ತಡವನ್ನು ತಗ್ಗಿಸಲೂ ನೆರವಾಗುತ್ತದೆ.

ಸಂಧಿವಾತ ಮತ್ತು ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಒಳ್ಳೆಯದು : ತಾಮ್ರದಲ್ಲಿರುವ ಉರಿಯೂತ ನಿವಾರಕ ಗುಣ ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಮತ್ತು ಸಂಧಿವಾತ ಕಡಿಮೆಯಾಗಿಸಲು ನೆರವಾಗುತ್ತದೆ. ಈ ತೊಂದರೆ ಇರುವವರು ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯಲು ಪ್ರಾರಂಭಿಸುವುದು ಉತ್ತಮ

ತೂಕ ಕಡಿಮೆ ಮಾಡುತ್ತೆ : ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಸೇವಿಸಿದರೆ ತೂಕವನ್ನು ಇಳಿಸಿಕೊಳ್ಳಬಹುದು. ಕೆಲವೊಮ್ಮೆ ಕಬ್ಬಿಣಾಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ತಿಂದು ಡಯಟ್ ಮಾಡಿದರೂ ತೂಕ ಕಡಿಮೆಯಾಗಲ್ಲ. ಹೀಗಾಗಿ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು ತಾಮ್ರದ ಪಾತ್ರೆಗಳಲ್ಲಿಟ್ಟ ನೀರು ಕುಡಿಯುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜೊತೆಗೆ ದೇಹದಲ್ಲಿ ಕೊಬ್ಬಿನಂಶವು ಹೆಚ್ಚಾಗದಂತೆ ತಡೆಯುತ್ತದೆ.

ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ :ತಾಮ್ರ ಕಡಿಮೆಯಾದರೆ ನಮ್ಮ ದೇಹ ಕಬ್ಬಿಣವನ್ನು ಹೀರಿಕೊಳ್ಳುವ ಸಾಮರ್ಥವೂ ಕಡಿಮೆಯಾಗುತ್ತದೆ. ಪರಿಣಾಮ, ರಕ್ತಹೀನತೆ. ಹಾಗಾಗಿ ಆಹಾರದಲ್ಲಿ ಕಬ್ಬಿಣದ ಅಂಶವಿದ್ದರೂ, ಇದನ್ನು ಹೀರಿಕೊಳ್ಳಲು ತಾಮ್ರದ ನೆರವು ಬೇಕೇ ಬೇಕು. ತಾಮ್ರದ ಅಂಶ ದೇಹದಲ್ಲಿ ಹೆಚ್ಚಿದರೆ ಕಬ್ಬಿಣದ ಅಂಶವೂ ಹೆಚ್ಚುತ್ತದೆ, ತನ್ಮೂಲಕ ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ

ಗಾಯಗಳು ಬೇಗ ವಾಸಿಯಾಗುತ್ತೆ :
ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ?ಾಮ್ರದ ಪಾತ್ರೆ ನೀರಿನಲ್ಲಿ ಬ್ಯಾಕ್ಟಿರಿಯಾ ಹಾಗೂ ವೈರಸ್ ನಾಶಪಡಿಸುವ ಶಕ್ತಿ ಇರುತ್ತದೆ. ಹೀಗಾಗಿ ಈ ನೀರು ಗಾಯಗಳು ಬೇಗನೆ ವಾಸಿಯಾಗಲು ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಈ ನೀರು ಹೆಚ್ಚಿಸಲು ಸಹಕರಿಸುತ್ತದೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….