ಆರೋಗ್ಯ

ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

135

ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. 
ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ. 

ಮ್ಮ ಜೀವನದಲ್ಲಿ ನೀರು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನುಷ್ಯನ ದೇಹದಲ್ಲಿ 70% ನೀರು ಇರುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲೂ ನೀರು ಬೇಕೇ ಬೇಕು. ಆದರೆ ಇತ್ತೀಚೆಗೆ ಮಾಲಿನ್ಯದಿಂದ ಜೀವಜಲ ಕಲುಷಿತವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಹಲವು ಕಾಯಿಲೆಗಳು ಬರುತ್ತಿದೆ. ಹೀಗಾಗಿ ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ನೀರು ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭವಿದೆ. 

ಆರ್ಯುವೇದದಲ್ಲಿ ತಾಮ್ರ ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಯಾಕೆಂದರೆ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ಪಿತ್ತ, ಕಫಗಳಲ್ಲಿ ಏರುಪೇರು ಉಂಟಾಗುವುದಿಲ್ಲ. ಅದರಲ್ಲೂ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರಿನಲ್ಲಿ ತುಳಸಿ ಎಲೆಗಳನ್ನು ಹಾಕಿಟ್ಟರೆ ಇನ್ನೂ ಉತ್ತಮ. ಈ ನೀರನ್ನು ಪ್ರತಿನಿತ್ಯ ಕುಡಿದರೆ ಕಫ ಕಡಿಮೆಯಾಗುತ್ತದೆ. ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಈ ನೀರು ಸಹಕರಿಸುತ್ತದೆ. ಜೊತೆಗೆ ದೇಹದಲ್ಲಿ ವಿಷಕಾರಿ ಆಮ್ಲ ಹೊರಹೊಮ್ಮದಂತೆ ಇದು ತಡೆಯುತ್ತದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದೆ, ಇದು ಹಲವಾರು ಆರೋಗ್ಯಕರ ಪ್ರಯೋಜನ ಗಳನ್ನು ನೀಡುತ್ತದೆ. ಇದು ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ಅಗತ್ಯವಾಗಿವೆ. ಅಲ್ಲದೇ ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.

ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತರ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾಗುತ್ತವೆ. ಅಲ್ಲದೇ ನೀರು ಕುಡಿಯುವ ಅರ್ಹತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿರುತ್ತದೆ. ನೀರನ್ನು ಸಂಗ್ರಹಿಸಲು ಬಳಸುವ ತಾಮ್ರದ ಪಾತ್ರೆಯ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಬೇಕು. ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಮಿತವಾಗಿ ಕುಡಿಯಬೇಕು. ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ 2 ರಿಂದ 3 ಲೋಟ ನೀರು ದೇಹಕ್ಕೆ ಬೇಕಾದ ಅಗತ್ಯ ತಾಮ್ರದ ಅಂಶವನ್ನು ಒದಗಿಸುತ್ತದೆ. ಮನುಷ್ಯ ದೇಹಕ್ಕೆ ಕೇವಲ 6 ಮಿಲಿಗ್ರಾಂ ತಾಮ್ರದ ಅಂಶ ಮಾತ್ರ ಅವಶ್ಯಕವಾಗಿರುತ್ತದೆ. ಒಂದು ವೇಳೆ ಅದಕ್ಕಂತ ಹೆಚ್ಚು ಪ್ರಮಾಣದಲ್ಲಿ ತಾಮ್ರ ನಮ್ಮ ದೇಹ ಸೇರಿದರೆ ಆರೋಗ್ಯಕ್ಕೆ ಹಾನಿಕಾರಕ. 1 ಗ್ರಾಂ ತಾಮ್ರದ ಅಂಶಕ್ಕಿಂತ ಹೆಚ್ಚು ತಾಮ್ರ ನಮ್ಮ ದೇಹ ಸೇರಿದರೆ ಕಿಡ್ನಿ ಸಮಸ್ಯೆ, ಹೊಟ್ಟೆ ನೋವು ಇನ್ನಿತರ ಸಮಸ್ಯೆಗಳು ಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ತೂಕ ಇಳಿಕೆಗೆ ನೆರವಾಗುತ್ತದೆ : ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಳ್ಳುತ್ತದೆ. ಕೊಬ್ಬನ್ನು ಬಳಸಿಕೊಂಡ ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲಾಗುತ್ತದೆ. ಇದು ತೂಕ ಇಳಿಕೆಗೆ ನೆರವಾಗುತ್ತದೆ. ನೀವು ಹೆಚ್ಚು ವ್ಯಾಯಾಮ ಮಾಡದೇ ಪರಿಣಾಮಕಾರಿಯಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಹೆಚ್ಚು ಹೆಚ್ಚಾಗಿ ತಾಮ್ರದ ಪಾತ್ರೆಯಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಪ್ರಾರಂಭಿಸಿ. 

ಚರ್ಮದ ಆರೋಗ್ಯಕ್ಕೆ ಒಳ್ಳೆಯದು : ಚರ್ಮದ ಆರೋಗ್ಯ ರಕ್ಷಣೆಯಲ್ಲಿ ತಾಮ್ರ ಬಹಳ ಸಹಕಾರಿಯಾಗಿದೆ. ತಾಮ್ರದ ಪಾತ್ರೆಗಳಲ್ಲಿ ಇಟ್ಟ ನೀರನ್ನು ಸೇವಿಸುವುದರಿಂದ ಮೆಲನಿನ್ ಉತ್ಪಾದನೆಯಾಗಿ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಹಾಗೆಯೇ ಚರ್ಮದ ಅಲರ್ಜಿ, ಮೊಡವೆಗಳು ಕೂಡ ಕಡಿಮೆಯಾಗುತ್ತದೆ.


ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ : ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿನ ಬ್ಯಾಕ್ಟೀರಿಯಾ ನಾಶವಾಗುತ್ತವೆ. ಈ ನೀರು ಉರಿಯೂತವನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆ ವ್ಯವಸ್ಥೆ ಉತ್ತಮಗೊಳ್ಳುವಂತೆ ಮಾಡುತ್ತದೆ.

ಹೃದಯಕ್ಕೆ, ವಿಶೇಷವಾಗಿ ಅಧಿಕ ರಕ್ತದೊತ್ತಡಕ್ಕೆ ಒಳ್ಳೆಯದು :ಅಮೇರಿಕನ್ ಕ್ಯಾನ್ಸರ್ ಸೊಸೈಟಿಯ ಪ್ರಕಾರ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು ತಾಮ್ರ ಉತ್ತಮವಾಗಿದೆ. ಅಲ್ಲದೇ ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸಿ ಅಧಿಕ ರಕ್ತದೊತ್ತಡವನ್ನು ತಗ್ಗಿಸಲೂ ನೆರವಾಗುತ್ತದೆ.

ಸಂಧಿವಾತ ಮತ್ತು ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಒಳ್ಳೆಯದು : ತಾಮ್ರದಲ್ಲಿರುವ ಉರಿಯೂತ ನಿವಾರಕ ಗುಣ ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಮತ್ತು ಸಂಧಿವಾತ ಕಡಿಮೆಯಾಗಿಸಲು ನೆರವಾಗುತ್ತದೆ. ಈ ತೊಂದರೆ ಇರುವವರು ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯಲು ಪ್ರಾರಂಭಿಸುವುದು ಉತ್ತಮ

ತೂಕ ಕಡಿಮೆ ಮಾಡುತ್ತೆ : ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಸೇವಿಸಿದರೆ ತೂಕವನ್ನು ಇಳಿಸಿಕೊಳ್ಳಬಹುದು. ಕೆಲವೊಮ್ಮೆ ಕಬ್ಬಿಣಾಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ತಿಂದು ಡಯಟ್ ಮಾಡಿದರೂ ತೂಕ ಕಡಿಮೆಯಾಗಲ್ಲ. ಹೀಗಾಗಿ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು ತಾಮ್ರದ ಪಾತ್ರೆಗಳಲ್ಲಿಟ್ಟ ನೀರು ಕುಡಿಯುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜೊತೆಗೆ ದೇಹದಲ್ಲಿ ಕೊಬ್ಬಿನಂಶವು ಹೆಚ್ಚಾಗದಂತೆ ತಡೆಯುತ್ತದೆ.

ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ :ತಾಮ್ರ ಕಡಿಮೆಯಾದರೆ ನಮ್ಮ ದೇಹ ಕಬ್ಬಿಣವನ್ನು ಹೀರಿಕೊಳ್ಳುವ ಸಾಮರ್ಥವೂ ಕಡಿಮೆಯಾಗುತ್ತದೆ. ಪರಿಣಾಮ, ರಕ್ತಹೀನತೆ. ಹಾಗಾಗಿ ಆಹಾರದಲ್ಲಿ ಕಬ್ಬಿಣದ ಅಂಶವಿದ್ದರೂ, ಇದನ್ನು ಹೀರಿಕೊಳ್ಳಲು ತಾಮ್ರದ ನೆರವು ಬೇಕೇ ಬೇಕು. ತಾಮ್ರದ ಅಂಶ ದೇಹದಲ್ಲಿ ಹೆಚ್ಚಿದರೆ ಕಬ್ಬಿಣದ ಅಂಶವೂ ಹೆಚ್ಚುತ್ತದೆ, ತನ್ಮೂಲಕ ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ

ಗಾಯಗಳು ಬೇಗ ವಾಸಿಯಾಗುತ್ತೆ :
ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ?ಾಮ್ರದ ಪಾತ್ರೆ ನೀರಿನಲ್ಲಿ ಬ್ಯಾಕ್ಟಿರಿಯಾ ಹಾಗೂ ವೈರಸ್ ನಾಶಪಡಿಸುವ ಶಕ್ತಿ ಇರುತ್ತದೆ. ಹೀಗಾಗಿ ಈ ನೀರು ಗಾಯಗಳು ಬೇಗನೆ ವಾಸಿಯಾಗಲು ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಈ ನೀರು ಹೆಚ್ಚಿಸಲು ಸಹಕರಿಸುತ್ತದೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸೌಂದರ್ಯ

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…