ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ.

ಇನ್ನು ಈಗ ಎಲ್ಲಿ ನೋಡಿದರು ಮಾಲಿನ್ಯ ಭರಿತ ವಾತಾವರಣ, ಈ ವಾಯು ಮಾಲಿನ್ಯದಿಂದಾಗಿ ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿದರೆ ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆ ಓಡಿ ಹೋಗುತ್ತದೆ. ಇನ್ನು ದೇಹದಲ್ಲಿ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಒಂದು ಲೋಟ ಬಿಸಿನೀರನ್ನು ಕುಡಿಯಿರಿ, ಇದು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇನ್ನು ರಕ್ತ ಹೀನತೆಯಿಂದ ಬಳಲುತ್ತಿರುವವರು ಮಲಗುವ ವೇಳೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗಿಸಿ ಕೆಲವೇ ದಿನಗಳಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು.

ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಹಲವು ರೋಗಗಳನ್ನು ಬೆಲ್ಲ ಹೇಗೆ ನಿವಾರಣೆ ಮಾಡುತ್ತದೆ ಎನ್ನುವುದನ್ನು ಈ ಕೆಳಗಿನ ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು ಅನುಮಾನ ಇದ್ದರೆ ವೈದ್ಯರ ಬಳಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು