ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ