ಮನಮಿಡಿಯುವ ಕಥೆ

ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

1156

ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…