ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…