ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…