News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

65

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ.

ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಳಿಕ ಎಲ್ಲರೂ ಮನೆಯೊಳಗೆ ಹೋಗಿ ಕುಳಿತುಕೊಂಡು ಕೆಲಕಾಲ ಮಾತನಾಡಿದ್ದಾರೆ.

ರಘು ದೀಕ್ಷಿತ್ ಮನೆಯಿಂದ ಹೋದ ಬಳಿಕ ಕುರಿ ಪ್ರತಾಪ್ ಮತ್ತು ವಾಸುಕಿ ವೈಭವ್ ಅಡುಗೆ ಮನೆಯಲ್ಲಿದ್ದರು. ಭೂಮಿ ಸೋಫಾ ಮೇಲೆ ಮಲಗಿದ್ದು, ಶೈನ್ ಭೂಮಿ ಪಕ್ಕದಲ್ಲಿ ಕುಳಿತಿದ್ದರು. ಆಗ ಭೂಮಿ, ನನಗೆ ಒಂಥರಾ ಆಗುತ್ತಿದೆ, ಏನಾಗುತ್ತಿದೆ ಎಂದು ಗೊತ್ತಾಗುತ್ತಿಲ್ಲ. ವಾಮಿಟ್ ಬರೋತರ ಆಗುತ್ತಿದೆ ಎಂದು ಹೇಳಿದ್ದಾರೆ.

ಆಗ ವಾಸುಕಿ, ಶೈನ್ ಮತ್ತು ಕುರಿ ಪ್ರತಾಪ್ ಅಯ್ಯೋ ಇನ್ನೂ ಮೂರು ದಿನ ಇರುವುದಕ್ಕೂ ಆಗುವುದಿಲ್ಲವೆನೋ ಎಂದು ರೇಗಿಸುತ್ತಾ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ತಂದು ಕೂರಿಸಿದ್ದಾರೆ. ಅಷ್ಟೇ ಅಲ್ಲದೇ ಶೈನ್ ತಮಾಷೆಗೆ ಆಕೆಯ ಸೂಟ್‍ಕೇಸ್, ಬಟ್ಟೆ ತಂದು ಕೊಟ್ಟಿದ್ದಾರೆ.

ಜೋಪಾನವಾಗಿ ಹೋಗು, ಹೊರಗಡೆ ಸಿಗೋಣ. ತುಂಬಾ ಚೆನ್ನಾಗಿ ಆಟವಾಡಿದ್ದೀಯಾ, ವಾರ ವಾರ ದಪ್ಪ ಆಗಿದ್ದೀಯಾ, ನಿನಗೆ ಹೊರಗಡೆ ಉಜ್ವಲವಾದ ಭವಿಷ್ಯವಿದೆ. ಹೋಗುವಾಗ ಬಿಗ್‍ಬಾಸ್ ಆಸ್ಪತ್ರೆಗೆ ತೋರಿಸುತ್ತಾರೆ ಎಂದು ಶೈನ್ ರೇಗಿಸಿದ್ದಾರೆ. ಕೊನೆಗೆ ತಿಂಡಿ ಜಾಸ್ತಿ ತಿಂದಿದ್ದಕ್ಕೆ ಈ ರೀತಿ ಆಗಿದೆ ಎಂದು ಭೂಮಿ ಒಪ್ಪಿಕೊಂಡಿದ್ದಾರೆ. ನಂತರ ಭೂಮಿಯನ್ನು ಬಿಗ್‍ಮನೆಗೆ ವಾಪಸ್ ಕರೆದುಕೊಂಡು ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ