ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ ಶಾಕ್ ಕೊಟ್ಟಿದೆ. ಹಾಗಾದರೆ ಆ ಪುಟ್ಟ ಮಗುವ ಹುಟ್ಟುವಾಗ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಗುವಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸ್ನೇಹಿತರೆ ಒಂದು ಸಾಮಾನ್ಯ ಮಗು ಹುಟ್ಟುವಾಗ ಆ ಮಗುವಿನ ಸಾಮಾನ್ಯವಾಗಿ ತೂಕ 7.5 ಫೌಂಡ್ ಅಂದರೆ 3.5 ಕೆಜಿ ತೂಕ ಇರುತ್ತದೆ, ಆದರೆ ಸ್ನೇಹಿತರೆ ಒಮ್ಮೊಮ್ಮೆ ಸೃಷ್ಟಿಯ ಮಹಿಮೆನೋ ಅಥವಾ ದೇವರ ಮಹಿಮೆನೋ ಅನಿಸುತ್ತದೆ ಮಕ್ಕಳು ಬಹಳ ವಿಶೇಷವಾಗಿ ಜನಿಸುತ್ತಾರೆ. ಸ್ನೇಹಿತರೆ ಇದು ದೇವರ ಮಹಿಮೆ ಅನಿಸುತ್ತದೆ, ಹೌದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಾಮಾನ್ಯ ಮಕ್ಕಳಿಗಿಂತ ಹೆಚ್ಚಿನ ತೂಕವನ್ನ ಹೊಂದಿರುವ ಮಗು ಜನಿಸಿದ್ದು ನೋಡುಗರ ಗಮನವನ್ನ ತನ್ನತ್ತ ಸೆಳೆದಿದೆ. ಹಾಸನದ ಒಂದು ಮಗು ಬಿಟ್ಟರೆ ಕರ್ನಾಟಕದಲ್ಲಿ ಹೆಚ್ಚು ತೂಕವನ್ನ ಹೊಂದಿರುವ ಮಗು ಇದಾಗಿದೆ ಮತ್ತು ಈ ಮಗು ಹುಟ್ಟುವಾಗ 5.9 ಕೆಜಿ ತೂಕ ಇದೆ ವೈದ್ಯರು ಹೇಳಿದ್ದಾರೆ.

ಇನ್ನು ಮಗು ಭೀಮಬಲದ ಮಗು ಅನ್ನುವ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ, ಯೋಗೇಶ್ ಮತ್ತು ಸರಸ್ವತಿ ದಂಪತಿಗಳು ಮೂಲಕತಃ ದರ್ಜಿಲಿನ್ ನಗರದವರಾಗಿದ್ದು ಬೆಂಗಳೂರಿನ ಯಲಹಂಕದಲ್ಲಿ ಕಳೆದ ಸುಮಾರು 16 ವರ್ಷಗಳಿಂದ ವಾಸವಾಗಿದ್ದಾರೆ, ಇನ್ನು ಈ ದಂಪತಿಗೆ ಈಗಾಗಲೇ 14 ವರ್ಷದ ಒಂದು ಮಗು ಇದ್ದು ಈಗ ಎರಡನೆಯ ಮಗು ಜನವರಿ 18 ನೇ ತಾರೀಕಿನಂದು ಜನಿಸಿದ್ದು ಸುಮಾರು 6 ಕೆಜಿ ತೂಕವನ್ನ ಹೊಂದಿದ್ದು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಾಸನದಲ್ಲಿ ಹುಟ್ಟಿದ ಒಂದು ಮಗು 7.25 ಕೆಜಿ ತೂಕವನ್ನ ಹೊಂದಿದ್ದು ಭಾರತದ ಮೊದಲ ಬಿಗ್ ಬೇಬಿ ಎಂದು ದಾಖಲೆಯನ್ನ ಮಾಡಿತ್ತು, ಇನ್ನು ಈ ಮಗು ಈಗ ಎರಡನೆಯ ಬಿಗ್ ಬೇಬಿ ಅನ್ನುವ ದಾಖಲೆಗೆ ಸಾಕ್ಷಿಯಾಗಿದೆ.

ಇನ್ನು ವಿಶ್ವದಲ್ಲಿ ಆಗತಾನೆ ಹುಟ್ಟಿದ ಮಗುವಿನ ತೂಕ 10.2 ಕೆಜಿ ತೂಕ ಇರುವುದು ಗಿನ್ನಿಸ್ ದಾಖಲೆಯಾಗಿದೆ, ಒಂದು ಸಾಮಾನ್ಯ ಮಗುವಿನ ತೂಕ 2.5 ಕೆಜಿ ತೂಕದಿಂದ 4.5 ಕೆಜಿ ತೂಕದ ವರೆಗೆ ಇರುತ್ತದೆ ಮತ್ತು ಹೆಣ್ಣು ಶಿಶುವಿಗೆ ಹೋಲಿಕೆ ಮಾಡಿದರೆ ಗಂಡು ಶಶುವಿನ ತೂಕ ಕೊಂಚ ಜಾಸ್ತಿ ಇರುತ್ತದೆ, ಇನ್ನು ಇಂತಹ ಮಕ್ಕಳು ಹುಟ್ಟುವುದು ಬಹಳ ಅಪರೂಪ ಎಂದು ಹೇಳುತ್ತಿದ್ದಾರೆ ವೈದ್ಯರು. ತಾಯಿ ಮಗುವನ್ನ ಎಲ್ಲಾ ಪರೀಕ್ಷೆಗೆ ಒಳಪಡಿಸಿದ ವೈದ್ಯರು ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ, ಸ್ನೇಹಿತರೆ ಈ ಮಗುವಿನ ತೂಕದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.