inspirational, ಸುದ್ದಿ

ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

49


ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ.

ಮರುದಿನ ಬೆಳಗ್ಗೆ ಅಡುಗೆ ವಿಭಾಗದ ಚೀಫ್ ಆಗಿರುವ ಸುಜಾತ ಅವರು ಸೇಬು ಯಾರು ತಿಂದರು ಎಂದು ಪ್ರಶ್ನಿಸಿದ್ದಾರೆ. ಆಗ ಚೈತ್ರ ನಾನೇ ಸೇಬು ತಿಂದಿರುವುದು ಎಂದು ಹೇಳಿದ್ದಾರೆ. ಬಳಿಕ ನಾನೊಬ್ಬಳೇ ಸೇಬು ತಿನ್ನಲಿಲ್ಲ ಚಂದನ್ ಅವರಿಗೆ ಕೊಟ್ಟು, ಎಲ್ಲರಿಗೂ ಕೊಟ್ಟು ತಿಂದೆ ಎಂದು ಉತ್ತರಿಸಿದ್ದಾರೆ.

ರಾತ್ರಿ ಪರ್ಮಿಶನ್ ಕೊಟ್ಟ ಚಂದನ್ ಆಚಾರ್ ಬೆಳಗ್ಗೆ ಚೈತ್ರ ಕೋಟೂರ್ ಗೆ ಕಿರಿಕಿರಿ ಮಾಡಿದರು. ”ನನ್ನ ಜೊತೆಗೆ ಚಂದನ್ ಕೂಡ ತಿಂದರು” ಅಂತ ಚೈತ್ರ ಹೇಳಿದ್ದಕ್ಕೆ ಅದು ತಪ್ಪು ಅಂತ ಎಲ್ಲರಲ್ಲಿಯೂ ರಿಜಿಸ್ಟರ್ ಆಗಲು ಪದೇ ಪದೇ ”ಡೀಸೆನ್ಸಿ ಇಲ್ಲ” ಅಂತ ಹೇಳಿ ಹೇಳಿ ಚೈತ್ರ ಪಿತ್ತ ನೆತ್ತಿಗೇರಿಸಿದರು.ಈ ವೇಳೆ ಚೈತ್ರ, ಚಂದನ್ ಮೇಲೆ ರೇಗಾಡುತ್ತಾರೆ. ಮತ್ತೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಮುಗಿಯುವ ಲಕ್ಷಣ ಕಾಣುತ್ತಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಜೈ ಜಗದೀಶ್ ಜೋರಾಗಿ ಗದರುತ್ತಾರೆ.

ಬಳಿಕ ಚೈತ್ರ ಮನೆಯಲ್ಲಿ ಎಲ್ಲರೂ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.ಸುಜಾತ ಹಾಗೂ ಚಂದನ್ ವರ್ತನೆಯಿಂದ ಬೇಸತ್ತ ಚೈತ್ರ ತಿಂಡಿ ತಿನ್ನುವುದಿಲ್ಲ ಎಂದು ಹಠ ಮಾಡುತ್ತಾರೆ. ಮನೆಯಲ್ಲಿದ್ದ ಸ್ಪರ್ಧಿಗಳು ಎಷ್ಟೇ ಸಮಾಧಾನ ಮಾಡಿದರೂ ಚೈತ್ರ ತಿಂಡಿ ತಿನ್ನಲು ಒಪ್ಪುವುದಿಲ್ಲ. ಬಳಿಕ ವಾಸುಕಿ ವೈಭವ್, ಶೈನ್ ಶೆಟ್ಟಿ, ಕುರಿ ಪ್ರತಾಪ್, ಕಿಶನ್ ಸೇರಿ ಯುವತಿಯರು ಚೈತ್ರರನ್ನು ಸಮಾಧಾನ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…