ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.