ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….