ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…