ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…