ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

93

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.