ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…