ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

89

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…