ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…