ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…