ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.
155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.
ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.
ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…