News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

61

ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್‌ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್‌, ವನ್ಯ ಜೀವಿ ಪಾರ್ಕ್‌,ವೆಟ್ ಲ್ಯಾಂಡ್‌ ಪಾರ್ಕ್‌, ಚಿಟ್ಟೆ ಪಾರ್ಕ್‌ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್‌ ಕೋರ್ಟ್‌ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.

54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್‌ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್‌ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್‌ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್‌ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್‌ ಕೋರ್ಟ್‌ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್‌ ಕೊನೆ ಅಥವಾ ಡಿಸೆಂಬರ್‌  ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…