News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

253

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….