News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

252

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…