ಸುದ್ದಿ

ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

103

ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳು ನೇರವಾಗಿ ಎಸ್‌ಎಸ್‌ಎಲ್‌ಸಿಯಲ್ಲಿ ಪಬ್ಲಿಕ್‌ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್‌ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್‌ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್‌ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್‌ ಮಾತ್ರೆ ನುಂಗಿಸಿದ ಸಚಿವ ಸುರೇಶ್‌ ಕುಮಾರ್‌ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಸುದ್ದಿ

    ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

    ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…