ಸುದ್ದಿ

BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

279

ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ.

ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ ಸಿಗುವುದಿಲ್ಲ.
ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರೂ ಜುಲೈ 31 ರೊಳಗೆ ಆಧಾರ್ ದೃಡೀಕರಣ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಯಾವುದೇ ರೀತಿಯ ಹಣ ಕೊಡಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಪಡಿತರ ಪಡೆಯುವ ಎಲ್ಲಾ ನ್ಯಾಯಬೆಲೆ(ರೇಷನ್ ಶಾಪ್) ಅಂಗಡಿಗಳಲ್ಲಿ ಆಧಾರ್ ಧೃಡೀಕರಣ ಮಾಡಿಸಿಕೊಳ್ಳಬಹುದಾಗಿದೆ.

ಜುಲೈ 31ರ ಒಳಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಹೋಗಿ ಖಡ್ಡಾಯವಾಗಿ ಬಯೋಮೆಟ್ರಿಕ್ ನೀಡಬೇಕಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ರೇಷನ್ ಸಿಗಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….