News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

33

ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್  ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್  ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.

ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…