ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.
ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…