ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.
ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…