ಸುದ್ದಿ

ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

By admin

October 23, 2019

ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್  ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್  ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.

ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.