ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.

2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.

ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.

ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….