News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

131

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.