ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

122

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….