News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

124

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…