News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಉಪಯುಕ್ತ ಮಾಹಿತಿ

ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

948

ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು.

ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆಗಳಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನವೆಂಬ ದೊಡ್ಡ ದೇವಸ್ಥಾನವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. 1799 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರಧ್ದಾ ಭಕ್ತಿಯಿಂದ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. ಹಾಗೂ ಹೆಚ್ಚಿನ ಮಹತ್ವ ತಂದಿದ್ದಾರೆ.

ಚಾಮುಂಡಿಬೆಟ್ಟ ಚಾರಿತ್ರಿಕ ಹಿನ್ನಲೆಯಲ್ಲಿ ಹೊಯ್ಸಳ, ವಿಜಯನಗರ ಹಾಗೂ ಮೈಸೂರು ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನಲೆಯನ್ನು ಗುರುತಿಸಲಾಗಿದೆ. ಕ್ರಿ.ಶ. 1573 ರಲ್ಲಿ ಚಾಮರಾಜ ಒಡೆಯರು ದೇವಿಯನ್ನು ಪೂಜಿಸಲು ಹೋಗುತ್ತಿದ್ದಾಗ ಅವರಿಗೆ ಸಿಡಿಲು ಬಡಿದು ಅವರ ತಲೆಯ ಕೂದಲೆಲ್ಲಾ ಉದುರಿ ಹೋದವೆಂದು ಇತಿಹಾಸ ಹೇಳುತ್ತದೆ.

ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿರುವ ದೇವಸ್ಥಾನ, ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಮಹಾದ್ವಾರದ ಮೇಲೆ ಸುಂದರವಾದ ಗೋಪುರ ಮತ್ತು ಗರ್ಭಗುಡಿಯ ಮೇಲೆ ‘ವಿಮಾನ’ ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿ ನಿರ್ಮಿತವಾಗಿದೆ. ಶಿಖರದ ಮೇಲೆ ಏಳು ಚಿನ್ನದ ಲೇಪಿತ ಕಲಶಗಳಿವೆ.

ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು. ‘ಸಿಂಹವಾಹನ’ ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂಧರ್ಭದಲ್ಲಿ ಬಳಸಲಾಗುತ್ತಿದ್ದು ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ದ್ವಾರದ ಮೇಲ್ಭಾಗದಲ್ಲಿ ಸಣ್ಣದೊಂದು ಗಣಪತಿಯ ವಿಗ್ರಹವನ್ನು ನೋಡಬಹುದು. ದ್ವಾರದ ಬೃಹತ್ ಮರದ ಬಾಗಿಲನ್ನು ಬೆಳ್ಳಿಯ ತಗಡಿನಿಂದ ಹೊದಿಸಲಾಗಿದ್ದು, ಬೆಳ್ಳಿಯ ಬಾಗಿಲಿನ ಮೇಲೆ ದೇವಿಯ ಹಲವು ಸ್ವರೂಪಗಳನ್ನು ತೋರಲಾಗಿದೆ. ಮಹಾದ್ವಾರದ ಕೆಳ ಪಾರ್ಶ್ವದಲ್ಲಿ ಇಂದ್ರಾದಿ ಅಷ್ಠದಿಕ್ಪಾಲಕರ ವಿಗ್ರಹಗಳಿವೆ.

ಮಹಾದ್ವಾರದಿಂದ ಒಳಗೆ ಹೋದರೆ ಬಲಭಾಗದಲ್ಲಿ ದಕ್ಷಿಣಾಭಿಮುಖವಾಗಿ ಗಣಪತಿಯ ಸಣ್ಣ ವಿಗ್ರಹವು ಸ್ಥಾಪಿಸಲ್ಪಟ್ಟಿದೆ. ವಿಘ್ನರಾಜನಿಗೆ ನಮಿಸಿ ಕೆಲವು ಕಲ್ಲಿನ ಮೆಟ್ಟಿಲುಗಳನ್ನು ಹತ್ತಿ ಹೋದರೆ ದೇವಸ್ಥಾನದ ಬಲಿಪೀಠ ಮತ್ತು ಧ್ವಜ ಸ್ಥಂಭ ಕಂಡುಬರುತ್ತದೆ. ಬಲಿಪೀಠದ ಮೇಲೆ ದೇವಿಯ ಪಾದಗಳನ್ನು ರೂಪಿಸಲಾಗಿದೆ. ಇವೆರಡರ ಮುಂಭಾಗದಲ್ಲಿ ಗರ್ಭಗುಡಿಗೆ ಅಭಿಮುಖವಾಗಿ ಸಣ್ಣದೊಂದು ನಂದಿ ವಿಗ್ರಹವಿದೆ. ಮಾತೆ ಚಾಮುಂಡಿಯನ್ನು ಅದು ವೀಕ್ಷಿಸುತ್ತಾ ಕುಳಿತಿದೆ. ಧ್ವಜ ಸ್ಥಂಭಕ್ಕೆ ಈಶಾನ್ಯದಲ್ಲಿ ಗೋಡೆಯ ಮೇಲೆ ಆಂಜನೇಯನ ವಿಗ್ರಹವಿದ್ದು ಅದಕ್ಕೂ ನಿತ್ಯ ಪೂಜೆ ಜರುಗುತ್ತದೆ. ಇಲ್ಲಿನ ಪ್ರವೇಶ ದ್ವಾರದಲ್ಲಿ ನಂದಿನಿ ಮತ್ತು ಕಮಲಿನಿ ಎಂಬ ದ್ವಾರಪಾಲಿಕೆಯರ ವಿಗ್ರಹಗಳು ದ್ವಾರದ ಎಡ ಮತ್ತು ಬಲ ಭಾಗದಲ್ಲಿವೆ.

ಗರ್ಭಗುಡಿಗೆ ಮುಂಚೆ ಇರುವ ಅತರಾಳದ ಎಡಭಾಗದಲ್ಲಿ ಮುದ್ದಾದ ಗಣಪತಿ ವಿಗ್ರಹ ಮತ್ತು ಬಲಭಾಗದಲ್ಲಿ ಭೈರವ ದೇವರ ವಿಗ್ರಹಗಳಿವೆ. ಭೈರವ ದೇವರ ಎಡಭಾಗದಲ್ಲಿ ಚಾಮುಂಡಿಯ ಪಂಚಲೋಹದ ಸುಂದರ ಉತ್ಸವ ಮೂರ್ತಿಯಿದೆ. ಗಣಪತಿಯ ಬಲಭಾಗದಲ್ಲಿ ಭಕ್ತನ ದಿರಿಸು ತೊಟ್ಟಿರುವ ಮುಮ್ಮಡಿ ಕೃಷ್ಣರಾಜ ಒಡೆಯರ ಆರು ಅಡಿ ಎತ್ತರದ ಸುಂದರ ಭಕ್ತ ವಿಗ್ರಹ ಕಾಣಬರುತ್ತದೆ. ಮಹಾರಾಜರು ತಮ್ಮ ಮೂವರು ಪತ್ನಿಯರೊಂದಿಗೆ ದೇವಿಗೆ ಕೈಮುಗಿದು ನಿಂತಿದ್ದಾರೆ. ಮಹಾರಾಜರ ಎಡಭಾಗಗಳಲ್ಲಿ ನಿಂತಿರುವವರೆಂದರೆ ರಮಾವಿಲಾಸ, ಲಕ್ಷ್ಮಿವಿಲಾಸ ಮತ್ತು ಕೃಷ್ಣವಿಲಾಸ ಮಹಾರಾಣಿಯರು. ಇವರುಗಳ ಶಿಲಾ ವಿಗ್ರಹಗಳ ಪಾದದ ಬಳಿಯ ಪೀಠದ ಮೇಲೆ ಇವರುಗಳ ಹೆಸರುಗಳನ್ನು ಕೆತ್ತಲಾಗಿದೆ.

ದೇವಾಲಯದ ಅರ್ಚಕರು ತಾಯಿ ಸ್ವರೂಪದ ಶಿಲಾ ಪ್ರತಿಮೆಯನ್ನು ಪ್ರತಿ ದಿನ ಅಲಂಕರಿಸಿ ಪೂಜೆ ಮಾಡುತ್ತಾರೆ. ಯದುಕುಲದ ದೇವತೆಯಾಗಿ ಬೆಳೆದು ಬಂದಿರುವ ಶ್ರೀ ಚಾಮುಂಡೇಶ್ವರಿಗೆ ಮೈಸೂರಿನ ಮಹಾರಾಜರುಗಳು ಹಲವಾರು ಬೆಲೆಬಾಳುವ ಹಾಗೂ ಅಪರೂಪವಾದ ಕಾಣಿಕೆಗಳನ್ನು ಶ್ರಧ್ಧಾಭಕ್ತಿಯಿಂದ ಒಪ್ಪಿಸಿದ್ದಾರೆ. ಈ ಶಕ್ತಿ ದೇವತೆಗೆ ಮಾನವ ಮತ್ತು ಪ್ರಾಣಿ ಬಲಿಯನ್ನು ಹಿಂದೆ ಕೊಡಲಾಗುತ್ತಿತ್ತು. ಆದರೆ 18ನೇ ಶತಮಾನದಲ್ಲಿ ಅದಕ್ಕೆ ಕಡಿವಾಣ ಬಿತ್ತು. ಈಗೇನಿದ್ದರೂ ಫಲಪುಷ್ಪಗಳ ಅರ್ಚನೆ, ಹಣ್ಣು ಹೂವು ಸಮರ್ಪಣೆ ಮಾತ್ರ ಮಾಡಲಾಗುತ್ತದೆ.

ಗರ್ಭಗುಡಿಯ ಮೇಲ್ಭಾಗದಲ್ಲಿ ಇನ್ನೊಂದು ಸಣ್ಣ ಗೋಪುರ ಕಂಡು ಬರುತ್ತದೆ. ದೇವಾಲಯದ ಹೊರಗಿನಿಂದ ‘ವಿಮಾನವನ್ನು’ ಕಾಣಬಹುದು. ಒಳ ಪಾರ್ಶ್ವದಲ್ಲಿರುವ ಪ್ರಾಕಾರದಲ್ಲಿ ಹಲವು ಸಣ್ಣ ಮೂರ್ತಿಗಳಿದ್ದು ಅಲ್ಲಿಯೂ ಪೂಜೆ ಪುನಸ್ಕಾರಗಳು ಜರುಗುತ್ತವೆ. ಪ್ರಾಕಾರದಲ್ಲಿ ಪ್ರದಕ್ಷಿಣೆ ಮುಗಿಸಿ ದೇವಸ್ಥಾನದಿಂದ ಹೊರಹೋಗುವಾಗ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನವನ್ನು ಮಾಡಬಹುದಾಗಿದೆ ರಾಘವೇಂದ್ರಆಚಾರ್ಯ

9901077772, ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು, ೧) ಮದುವೆ, ೨) ಸಂತಾನ ಕೊರತೆ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ, ೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ,೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…