ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು. ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.
ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.
ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…