ಸುದ್ದಿ

ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

80

ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.  ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು.  ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ,  ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು  ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು  ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ  ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.

ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ  ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ  ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ  ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.

ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…