ಸಿನಿಮಾ, ಸುದ್ದಿ

ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

684

ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.

ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.

ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.

ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.

ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್‌ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ. 
ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.

ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…