ಸಿನಿಮಾ, ಸುದ್ದಿ

ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

683

ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.

ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.

ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.

ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.

ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್‌ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ. 
ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.

ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…