ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ ಇವರಿಬ್ಬರದು ಹಿಟ್ ಜೋಡಿ.
ಸುನಿಲ್ ಮತ್ತು ಮಾಲಾಶ್ರೀ ಹಲವಾರು ಹಿಟ್ ಚಿತ್ರಗಳನ್ನು ನೀಡಿದರು. ಬೆಳ್ಳಿ ಕಾಲುಂಗುರ ,ಸಿಂಧೂರ ತಿಲಕ, ಮನಮೆಚ್ಚಿದ ಸೊಸೆ ,ಮರಣ ಮೃದಂಗ ಹೀಗೆ ಅನೇಕ ಚಿತ್ರಗಳಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ನಡೆಸಿ ಸೈ ಎನಿಸಿಕೊಂಡರು ಈ ಜೋಡಿ ತೆರೆಯ ಮೇಲೆ ಬಹಳ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿತ್ತು. ಮಾಲಾಶ್ರೀ ಸ್ವಲ್ಪ ಜೋರು ಅನಿಸ್ಸಿದ್ರು ಸುನಿಲ್ ಅವರ ಚಾಕಲೇಟು ಹೀರೊ ಇಮೇಜ್ ಅದಕ್ಕೆ ಹೇಳಿ ಮಾಡಿಸಿದ ಹಾಗೆ ಇರ್ತಿತ್ತು.
ಶ್ರುತಿ ಚಿತ್ರದಿಂದ ಪ್ರಾರಂಭವಾದ ಸುನಿಲ್ ಅವರ ಸಿನಿ ಪಯಣ ತದನಂತರ, ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಬೆಳ್ಳಿ ಕಾಲುಂಗುರ, ಮಾಂಗಲ್ಯ, ನಗು ನಗುತಾ ನಲಿ, ನಗರದಲ್ಲಿ ನಾಯಕರು, ಸಿಡಿದೆದ್ದ ಶಿವ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಸುನಿಲ್ ತೆಲುಗು ಚಿತ್ರರಂಗದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದರು. ಮಾಲಾಶ್ರೀ ಮತ್ತು ಸುನೀಲ್ ಅವರ ಜೋಡಿ ಆ ಸಮಯದಲ್ಲಿ ಕನ್ನಡ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿಯಾಗಿತ್ತು.
ಇವರು ಒಟ್ಟಾಗಿ ಅಭಿನಯಿಸಿದ ಚಿತ್ರಗಳು ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ ನಿಜಜೀವನದಲ್ಲಿ ಒಂದಾಗಬೇಕು ಎಂದು ಅದೆಷ್ಟೋ ಅಭಿಮಾನಿಗಳು ಕನಸು ಕಂಡಿದ್ದರು. ಅಂತೆಯೇ ಸುನೀಲ್ ಮತ್ತು ಮಾಲಾಶ್ರೀ ಪ್ರೇಮದಲ್ಲಿದ್ದಾರೆ ಎಂಬ ವಿಷಯ ಸಿನಿಮಾ ರಂಗದಲ್ಲಿ ಹರಡಿತ್ತು. ಮೂಲಗಳ ಪ್ರಕಾರ ತಾವು ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದರಂತೆ.
ಯಶಸ್ಸಿನ ಮೆಟ್ಟಿಲು ಹತ್ತುತ್ತಿರಬೇಕಾದರೆನೇ ಜವರಾಯ ಸುನೀಲ್ ಗಾಗಿ ಕಾಯುತ್ತಿದ್ದ ಅನ್ಸತ್ತೆ. 1994 ರಂದು ಸುನಿಲ್ ಮಾಲಾಶ್ರೀ ಮತ್ತು ಪ್ರೊಡ್ಯೂಸರ್ ಸಚಿನ್ ಮಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಕಾರಲ್ಲಿ ಬರಬೇಕಾದರೆ ಟ್ರಕ್ಕೊಂದು ಸುನೀಲ್ ಅವರ ಕಾರಿಗೆ ಗುದ್ದತ್ತೆ. ಸುನಿಲ್ ಸ್ಥಳದಲ್ಲೇ ಸಾವನ್ನಪ್ಪುತ್ತಾರೆ.
ದುಃಖಕರ ವಿಷಯವೇನೆಂದರೆ ಅಪಘಾತವಾದ ನಂತರ ನಲವತ್ತು ನಿಮಿಷಗಳ ಕಾಲ ಸುನೀಲ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆದರೆ ಸುನೀಲ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಾವಿನಿಂದ ಚಿತ್ರರಂಗ ಬಹಳ ಭಾವುಕದಿಂದ ಕೂಡಿತ್ತು.
ಸುನೀಲ್ ಅವರ ಸಮಾಧಿಯಲ್ಲಿ ಒಂದು ಮರವನ್ನು ನೆಟ್ಟಿದ್ದ ಸುನಿಲ್ ತಾಯಿ, ಈಗಲೂ ಕೂಡ ಆ ಮರವನ್ನೆ ತನ್ನ ಮಗ ಎಂದು ನಂಬಿ ಜೀವನ ಸಾಗಿಸುತ್ತಿದ್ದಾರೆ.! ಮಗನ ಸಾವಿನಿಂದ ಮನ ನೊಂದಿರುವ ಆ ವಯಸ್ಸಾದ ತಾಯಿ, ನನ್ನ ಮಗನ ಸಾವಿಗೆ ಇಲ್ಲಸಲ್ಲದ ಬಣ್ಣಗಳನ್ನು ಕಟ್ಟಬೇಡಿ, ಇಡೀ ಚಿತ್ರರಂಗ ನನ್ನ ಮಗನ ಜೊತೆ ಆತ್ಮೀಯವಾಗಿತ್ತು. ಅವನ ಸಾವು ಆಕಸ್ಮಿಕ ,ಅವನ ಹಣೆಯಲ್ಲಿ ಬರೆದದ್ದು ಇಷ್ಟೇ ಇದು ವಿಧಿಲಿಖಿತ. ಎಂದು ಭಾವುಕರಾಗಿದ್ದಾರೆ. ಅಂದು ಕರ್ನಾಟಕ ಫಿಲಂ ಇಂಡಸ್ಟ್ರಿ ಒಂದು ಒಳ್ಳೆಯ ನಾಯಕನನ್ನು ಕಳೆದುಕೊಳ್ಳುತ್ತೆ. ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳಕಾಗಲ್ಲ. ಯಾರೇ ಆದ್ರು ಸಾವಿಗೆ ಸೋಲಲೇ ಬೇಕು. ಆದ್ರೆ ಇನ್ನು ಬಾಳಿ ಬದುಕಬೇಕಾಗಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸುನಿಲ್ ಅವರ ಸಾವು ಕನ್ನಡ ಚಿತ್ರ ರಂಗಕ್ಕೆ ತುಂಬಾಲಾರದ ನಷ್ಟ ಅಂತಾನೆ ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.