ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…