News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಆರೋಗ್ಯ

ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

212

ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.


ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.

ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.