ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.

ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…