ಆರೋಗ್ಯ

ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

345

ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.

ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.

ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.

ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.

ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.

ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.

ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…