ಆರೋಗ್ಯ

ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

341

ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.

ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.

ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.

ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.

ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.

ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.

ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…